ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನದಿಗೆ ಪಂಪ ಪ್ರಶಸ್ತಿ

Last Updated 26 ಫೆಬ್ರುವರಿ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: 2015ನೇ ಸಾಲಿನ ‘ಪಂಪ ಪ್ರಶಸ್ತಿ’ಗೆ ಪ್ರೊ.ಬಿ.ಎ. ಸನದಿ ಅವರನ್ನು ಆಯ್ಕೆ ಮಾಡಲಾಗಿದೆ. ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಯು ನೇಮಿಚಂದ್ರ ಅವರಿಗೆ ಲಭಿಸಿದೆ.

ಮಹಾರಾಷ್ಟ್ರದ ಜತ್ತ ಪ್ರದೇಶದಲ್ಲಿ ಕನ್ನಡ ಶಾಲೆಗಳ ಉಳಿವಿಗಾಗಿ ಕೆಲಸ ಮಾಡುತ್ತಿರುವ ಎಂ.ಎಸ್. ಸಿಂಧೂರ ಅವರನ್ನು ‘ಪ್ರೊ.ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯು ರಾಯಚೂರಿನ ಜಂಬಣ್ಣ ಅಮರಚಿಂತ ಅವರಿಗೆ ಲಭಿಸಿದೆ.

ನಾಲ್ಕೂ ಪ್ರಶಸ್ತಿಗಳು ತಲಾ ₹ 3 ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿವೆ. ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT