ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬರದಗೆ `ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ'

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮೈಸೂರು:    ಜೆಎಸ್‌ಎಸ್ ಮಹಾವಿದ್ಯಾಪೀಠದ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ನೀಡುವ     2011ನೇ ಸಾಲಿನ  `ಶ್ರೀ ಶಿವರಾತ್ರೀಶ್ವರ  ಪ್ರಶಸ್ತಿ'ಗೆ ಡಾ.ಬಸವರಾಜ     ಸಬರದ ಅವರು ರಚಿಸಿರುವ `ಶರಣರು ಮತ್ತು ದಾಂಪತ್ಯ' ಕೃತಿ ಆಯ್ಕೆಯಾಗಿದೆ.

ಡಾ.ಬಸವರಾಜ ಸಬರದ ಅವರು ಗುಲ್ಬರ್ಗ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಈವರಿಗೆ 54 ಕೃತಿಗಳನ್ನು ರಚಿಸಿದ್ದಾರೆ. 53 ಕೃತಿಗಳನ್ನು ಸಂಪಾದಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚಿನ ಮೌಲಿಕ ಲೇಖನಗಳನ್ನು ಬರೆದಿದ್ದಾರೆ.

ಪ್ರಶಸ್ತಿಯು ರೂ 25 ಸಾವಿರ  ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಸಾಹಿತ್ಯ, ಧರ್ಮ, ಸಂಸ್ಕೃತಿ ಕುರಿತು ಪ್ರಕಟವಾಗುವ ಕೃತಿಗಳಿಗೆ 1983ರಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT