ಬಿಬಿಎಂಪಿ ಸದಸ್ಯ ಎಂ.ರೇವಣ್ಣ ಮಾತನಾಡಿ, ಯಶೋಧರಮ್ಮ ದಾಸಪ್ಪ ಅವರು ತ್ಯಾಗ ಮತ್ತು ತತ್ವ ನಿಷ್ಠೆಗಳಿಂದ 1970ರಲ್ಲಿ ಸ್ವಯಂಸೇವಾ ಸಂಸ್ಥೆಗಳನ್ನು ಒಗ್ಗೂಡಿಸಿದರು. ಅವರ ಶ್ರಮವನ್ನು ಅರ್ಥ ಮಾಡಿಕೊಂಡು ಸಮಾಜದ ಕೆಳಸ್ತರದಲ್ಲಿರುವವರನ್ನು ಗುರುತಿಸಿ ನೆರವು ನೀಡುವ ಮೂಲಕ ಸಮಾಜಮುಖಿಯಾಗಿಸುವ ಜವಾಬ್ದಾರಿ ಪದಾಧಿಕಾರಿಗಳ ಹೆಗಲ ಮೇಲಿದೆ ಎಂದರು.
ರಾಜ್ಯ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಕುಬೇರ್, ಬಿಬಿಎಂಪಿ ಸದಸ್ಯೆ ಕೆ.ಪೂರ್ಣಿಮಾ ಮಾತನಾಡಿದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್, ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ ಕಾರ್ಯದರ್ಶಿ ಸುಶೀಲಮ್ಮ, ಸಮಿತಿಯ ಉಪಾಧ್ಯಕ್ಷ ಜಿ.ವೆಂಕಟೇಶ್, ವಾರ್ಡ್ ಅಧ್ಯಕ್ಷ ಹನುಮಂತು, ಸಂಚಾಲಕ ಪ್ರಸಾದ್ ಉಪಸ್ಥಿತರಿದ್ದರು.