ಚಳ್ಳಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನತೆಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಎತ್ತಿ ಹಿಡಿಯುವ ಮೂಲಕ ಸಂವಿಧಾನದ ಆಶಯವನ್ನು ಈಡೇರಿಸಬೇಕಾಗಿದೆ ಎಂದು ಬೆಂಗಳೂರಿನ ಸಮಾಜವಾದ ಸಮಾನತೆ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ಬಾಪು ಹೆದ್ದೂರ್ ಶೆಟ್ಟಿ ಅಭಿಪ್ರಾಯಪಟ್ಟರು.ಚಳ್ಳಕೆರೆ ಪಟ್ಟಣದ ಎಚ್ಪಿಪಿಸಿ ಕಾಲೇಜಿನ ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.