ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತರಿಗೆ ಒಳ ಮೀಸಲಾತಿ ಕಲ್ಪಿಸುವುದನ್ನು ವಿರೋಧಿಸಿ, ಬಿಜೆಪಿ `ಒಬಿಸಿ~ ವರ್ಗಗಳ ಸಮಾವೇಶ ಆಯೋಜಿಸಿರುವುದನ್ನು ಕಾಂಗ್ರೆಸ್ ಗುರುವಾರ ಟೀಕಿಸಿದೆ.
`ಒಬಿಸಿ ವರ್ಗಗಳ ಕುರಿತು ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದೆ~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು. ಜೆಡಿಎಸ್, ಬಿಜೆಪಿ, ಪಕ್ಷೇತರ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿದ್ದಾರೆ ಎಂದರು. ಆದರೆ ಆ ಶಾಸಕರು ಯಾರು ಎಂಬುದನ್ನು ಬಹಿರಂಗಪಡಿಸಲಿಲ್ಲ. ಕೆಪಿಸಿಸಿ ಸರ್ವಸದಸ್ಯರ ಸಭೆ ಶನಿವಾರ ನಡೆಯಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಸೇರಿದಂತೆ ಅನೇಕ ವಿಚಾರಗಳ ಚರ್ಚೆ ನಡೆಯಲಿದೆ ಎಂದರು.