ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನ ಸಿದ್ಧತೆ: ಪರಿಶೀಲನೆ

Last Updated 21 ಡಿಸೆಂಬರ್ 2013, 8:59 IST
ಅಕ್ಷರ ಗಾತ್ರ

ಮಡಿಕೇರಿ: ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧಿಸಿದಂತೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿರುವ ಸ್ಥಳವನ್ನು ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಶುಕ್ರವಾರ ಪರಿಶೀಲನೆ ಮಾಡಿದರು.

ಮುಖ್ಯ ವೇದಿಕೆ ನಿರ್ಮಾಣ, ಮುಖ್ಯ ವೇದಿಕೆಯ ಸನೀಹದಲ್ಲಿ ಮಾಧ್ಯಮ ಕೇಂದ್ರ ಸ್ಥಾಪನೆ, ವಾಹನ ನಿಲುಗಡೆ, ಮುಖ್ಯ ವೇದಿಕೆಯ ಬಲ ಭಾಗದಲ್ಲಿ 300 ಪುಸ್ತಕ ಮಳಿಗೆ ನಿರ್ಮಾಣ, ಮೂಲಸೌಲಭ್ಯಗಳು ಮತ್ತಿತರ ಕಾರ್ಯಗಳಿಗೆ ಸಂಬಂಧಿಸಿದಂತೆ ಸುದೀರ್ಘವಾಗಿ ಪರಿಶೀಲನೆ ನಡೆಸಲಾಯಿತು.  

ಸಮ್ಮೇಳನ ವೇದಿಕೆ ನಿರ್ಮಾಣಕ್ಕೆ ಟೆಂಡರ್ ಪಡೆದಿರುವ ಬೆಂಗಳೂರಿನ ರಾಜಾ ಎಂಟರ್ ಪ್ರೈಸರ್ಸ್‌ನ ಕೆ.ವಿ. ಶಂಕರ ಅವರು, ಮುಖ್ಯ ವೇದಿಕೆ ನಿರ್ಮಾಣ, ಮಾಧ್ಯಮ ಕೇಂದ್ರ, ಪುಸ್ತಕ ಮಳಿಗೆ ನಿರ್ಮಾಣ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಪಿ. ರಮೇಶ್, ನಗರಸಭೆ ಆಯುಕ್ತ ಎನ್.ಎಂ. ಶಶಿಕುಮಾರ್, ಲೋಕೋಪ ಯೋಗಿ ಇಲಾಖೆ ಕಾರ್ಯ ಪಾಲಕ ಎಂಜನಿಯರ್‌ ವೆಂಕಟಾದ್ರಿ, ಸಹಾಯಕ ಕಾರ್ಯಪಾಲಕ  ಎಂಜನಿಯರ್‌ ವಿನಯ್ ಕುಮಾರ್, ಮೊಹಿದ್ದೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT