ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನದ ಬಾಕಿ ಶೀಘ್ರ ಪಾವತಿ

Last Updated 8 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ದುಡಿದ ಮತ್ತು ಸಹಕರಿಸಿದ ಎಲ್ಲರಿಗೂ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಗೃಹ ಸಚಿವ ಆರ್.ಅಶೋಕ್ ಅಭಿನಂದನೆ ಸಲ್ಲಿಸಿದರು.

ಸಮ್ಮೇಳನ ನಿರೀಕ್ಷೆ ಮೀರಿ ಯಶಸ್ಸು ಕಂಡಿದೆ ಎಂದು ಹರ್ಷ ವ್ಯಕ್ತಪಡಿಸಿದ ಅವರು ಕನ್ನಡ ಸಾಹಿತ್ಯ ಪರಿಷತ್‌ಗೆ ಇನ್ನೂ 1.5 ಕೋಟಿ ರೂಪಾಯಿ  ಬಾಕಿ ನೀಡಬೇಕಿದ್ದು, ಅದನ್ನು ಇನ್ನೊಂದು ವಾರದಲ್ಲಿ ಪಾವತಿಸಲಾಗುವುದು ಎಂದರು.

ಸಮ್ಮೇಳನಕ್ಕೆ 4ರಿಂದ 5 ಕೋಟಿ ರೂಪಾಯಿ ಖರ್ಚಾಗಿರುವ ಸಾಧ್ಯತೆ ಇದ್ದು, ಸದ್ಯದಲ್ಲೇ ಪೂರ್ಣ ಲೆಕ್ಕಪತ್ರ ನೀಡಲಾಗುವುದು. ನಗರ ಜಿಲ್ಲಾಧಿಕಾರಿಯೇ ಖಂಜಾಚಿ ಕೂಡ ಆಗಿದ್ದಾರೆ ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಪುಸ್ತಕ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 8 ಕೋಟಿ ರೂಪಾಯಿ ಮೊತ್ತದ ಪುಸ್ತಕಗಳು ಮಾರಾಟವಾಗಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT