ಮೈಸೂರು: `ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆಯ ಅಂಗವಾಗಿ ಆಚರಿಸಲಾಗುವ ಎಂಜಿನಿಯರ್ಗಳ ದಿನವನ್ನು ಮುಂದಿನ ವರ್ಷದಿಂದ ಸರ್ಕಾರವೇ ಆಚರಿಸಲಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಘೋಷಿಸಿದರು.
ಸರ್.ಎಂ. ವಿಶ್ವೇಶ್ವರಯ್ಯನವರ 151ನೇ ಜನ್ಮದಿನೋತ್ಸವ ಮತ್ತು ಎಂಜಿನಿಯರ್ಗಳ ದಿನಾಚರಣೆ ಅಂಗವಾಗಿ ಗುರುವಾರ ಕರ್ನಾಟಕ ಎಂಜಿನಿಯರುಗಳ ಸಂಘ, ಕರ್ನಾಟಕ ಎಂಜಿನಿಯರಂಗ್ ಸೇವಾ ಸಂಘ ಹಾಗೂ ಸರ್ಕಾರದ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಕಾರ್ಯಪಡೆ ಆಶ್ರಯದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದರು.
`ಸರ್.ಎಂ. ವಿಶ್ವೇಶ್ವರಯ್ಯನವರ ಮೌಲ್ಯಗಳು, ಮಹಾನ್ ಕಾರ್ಯಗಳು ಮತ್ತು ಆದರ್ಶಗಳನ್ನು ಪ್ರಚುರಪಡಿಸಲು ಅವರ ದಿನಾಚರಣೆಯನ್ನು ಸರ್ಕಾರವೇ ಆಚರಿಸಲಿದೆ. ಸಾಧ್ಯವಾದರೆ ಮುಂದಿನ ಎಂಜಿನಿಯರಿಂಗ್ ದಿನಾಚರಣೆಯಂದು ರಾಜ್ಯದ ಒಂದು ನಗರದಲ್ಲಿ ಸಚಿವ ಸಂಪುಟದ ಸಭೆಯನ್ನೂ ಹಮ್ಮಿಕೊಳ್ಳಲಾಗುವುದು~ ಎಂದು ಹೇಳಿದರು.