ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್.ಎಂ.ವಿ. ಜನ್ಮದಿನಾಚರಣೆ ಸರ್ಕಾರದಿಂದಲೇ ಆಚರಣೆ

Last Updated 15 ಸೆಪ್ಟೆಂಬರ್ 2011, 19:00 IST
ಅಕ್ಷರ ಗಾತ್ರ

ಮೈಸೂರು: `ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆಯ ಅಂಗವಾಗಿ ಆಚರಿಸಲಾಗುವ ಎಂಜಿನಿಯರ್‌ಗಳ ದಿನವನ್ನು  ಮುಂದಿನ ವರ್ಷದಿಂದ ಸರ್ಕಾರವೇ ಆಚರಿಸಲಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಘೋಷಿಸಿದರು.

ಸರ್.ಎಂ. ವಿಶ್ವೇಶ್ವರಯ್ಯನವರ 151ನೇ ಜನ್ಮದಿನೋತ್ಸವ ಮತ್ತು ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ಗುರುವಾರ ಕರ್ನಾಟಕ ಎಂಜಿನಿಯರುಗಳ ಸಂಘ, ಕರ್ನಾಟಕ ಎಂಜಿನಿಯರಂಗ್ ಸೇವಾ ಸಂಘ ಹಾಗೂ ಸರ್ಕಾರದ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಕಾರ್ಯಪಡೆ ಆಶ್ರಯದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದರು.

`ಸರ್.ಎಂ. ವಿಶ್ವೇಶ್ವರಯ್ಯನವರ ಮೌಲ್ಯಗಳು, ಮಹಾನ್ ಕಾರ್ಯಗಳು ಮತ್ತು ಆದರ್ಶಗಳನ್ನು ಪ್ರಚುರಪಡಿಸಲು ಅವರ ದಿನಾಚರಣೆಯನ್ನು ಸರ್ಕಾರವೇ ಆಚರಿಸಲಿದೆ. ಸಾಧ್ಯವಾದರೆ ಮುಂದಿನ ಎಂಜಿನಿಯರಿಂಗ್ ದಿನಾಚರಣೆಯಂದು ರಾಜ್ಯದ ಒಂದು ನಗರದಲ್ಲಿ ಸಚಿವ ಸಂಪುಟದ ಸಭೆಯನ್ನೂ ಹಮ್ಮಿಕೊಳ್ಳಲಾಗುವುದು~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT