ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಪರವಾಗಿಯೇ ತೀರ್ಪು :ಸುರೇಶ್ ಕುಮಾರ್

Last Updated 14 ಫೆಬ್ರುವರಿ 2011, 18:10 IST
ಅಕ್ಷರ ಗಾತ್ರ

ಬೆಂಗಳೂರು: ‘ಅನರ್ಹಗೊಂಡಿರುವ ಪಕ್ಷೇತರ ಶಾಸಕರು ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದರೂ ತೀರ್ಪು ಸರ್ಕಾರದ ಪರವಾಗಿಯೇ ಬರಲಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ನಗರದಲ್ಲಿ ಸೋಮವಾರ  ಜಲಮಂಡಳಿ ವತಿಯಿಂದ ನಡೆದ ಸಾರ್ವಜನಿಕ ನಿರ್ಮಿತಿಗಳ ಗುಣಮಟ್ಟ ಪರಿಶೀಲನಾ ಕಾರ್ಯಪಡೆ ಮತ್ತು ತಜ್ಞರ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾತನಾಡಿದರು.

‘ಸದನದಲ್ಲಿ ಸ್ಪೀಕರ್ ಪರಮೋಚ್ಛ ನಾಯಕ ಎಂಬುದನ್ನು ಹೈಕೋರ್ಟ್ ತೀರ್ಪು ಎತ್ತಿಹಿಡಿದಿದೆ. ಅನರ್ಹಗೊಂಡಿರುವ ಪಕ್ಷೇತರ ಶಾಸಕರು ಈ ಹಿಂದೆ ರಾಜ್ಯಪಾಲರಿಗೆ ಪತ್ರ ಬರೆದದ್ದು ಸರಿಯಾದ ಕ್ರಮವಲ್ಲ’ ಎಂದು ಅವರು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT