ನೆಲಮಂಗಲ: `ಸರ್ಕಾರದ ಜನಪರ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಜನ ತಮ್ಮ ಕೆಲಸ ಮಾಡಿಸಿಕೊಳ್ಳಲು ಪದೇ ಪದೇ ತಾಲ್ಲೂಕು ಕಚೇರಿಗೆ ತೆರಳುವಂತಾಗಿದೆ' ಎಂದು ಮಾಜಿ ಸಚಿವ ಡಾ.ಎಂ.ಶಂಕರ್ ನಾಯಕ್ ದೂರಿದರು.
ಸ್ಥಳೀಯ ಯುವ ಕಾಂಗ್ರೆಸ್ ಘಟಕವು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಈಚೆಗೆ ಏರ್ಪಡಿಸಿದ್ದ ಸಹಾಯ ಹಸ್ತ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಉಮೇಶ್, `ಪಡಿತರ ಚೀಟಿ ಸಮರ್ಪಕವಾಗಿ ವಿತರಣೆಯಾಗಿಲ್ಲ. ಅನೇಕ ಸೌಲಭ್ಯ ಗಳ ವಿತರಣೆಯಲ್ಲಿ ವಿಳಂಬವಾಗಿದೆ' ಎಂದು ದೂರಿದರು.