ಕೋಲಾರ: ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಕೇಸರಿ ಬಾವುಟಗಳನ್ನು ತೆರವು ಮಾಡುವ ನಗರಸಭೆ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಭಜರಂಗದಳ ನಾಲ್ವರನ್ನು ನಗರಠಾಣೆ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಮುನಿಯಪ್ಪ, ನಿರಂಜನ್, ಕೃಷ್ಣಪ್ಪ ಮತ್ತು ನರೇಂದ್ರ ಬಂಧಿತ ಆರೋಪಿಗಳು. ಕಾರ್ಯಾಚರಣೆಗೆ ಅಡ್ಡಿಪಡಿಸಿದ ಹಲವು ಮುಖಂಡರ ಬಂಧನಕ್ಕೆ ಪೊಲೀಸ್ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಮೀನಿಗೆ ಅರ್ಜಿ: ತಮ್ಮ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಭಜರಂಗದಳದ ಪ್ರಮುಖರಾದ ಬಾಲಾಜಿ, ಅಪ್ಪಿ, ಬಾಬು ಮತ್ತು ಚಿನ್ನಪ್ಪ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.