ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಿತಾ ನಾಗಭೂಷಣಗೆ ಪು.ತಿ.ನ. ಕಾವ್ಯ ಪುರಸ್ಕಾರ

Last Updated 7 ಫೆಬ್ರುವರಿ 2011, 19:05 IST
ಅಕ್ಷರ ಗಾತ್ರ

ಶಿವಮೊಗ್ಗ: ಕವಯತ್ರಿ ಸವಿತಾ ನಾಗಭೂಷಣ ಅವರನ್ನು 2009ರ ಸಾಲಿನ ‘ಪು.ತಿ.ನ. ಕಾವ್ಯ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಅಧ್ಯಕ್ಷತೆಯ ಆಯ್ಕೆ ಸಮಿತಿ ಸವಿತಾ ಅವರ ‘ದರುಶನ’ ಕವನ ಸಂಕಲನವನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ ಎಂದು ಪು.ತಿ.ನ. ಟ್ರಸ್ಟ್‌ನ ಕಾರ್ಯದರ್ಶಿ ಡಾ.ಶ್ರೀರಾಮ ಭಟ್ ತಿಳಿಸಿದ್ದಾರೆ.

ಪ್ರಶಸ್ತಿ 25ಸಾವಿರ ರೂ. ನಗದು ಮತ್ತು ಯದುಗಿರಿಯ ಪ್ರತಿಕೃತಿಯುಳ್ಳ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿಯನ್ನು ಮಾರ್ಚ್ 6ರಂದು ಮೇಲುಕೋಟೆಯಲ್ಲಿನ ಪು.ತಿ.ನ. ಅವರ ಮೂಲ ಮನೆಯಲ್ಲಿ ನಡೆಯಲಿರುವ ಅವರ ಸಾಂಸ್ಕೃತಿಕ ಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಹಿರಿಯ ಸಾಹಿತಿಗಳ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT