ಹಾವೇರಿ: `ಕೃಷಿ ನೀತಿ, ಕೈಗಾರಿಕೆ ನೀತಿ ಹಾಗೂ ಯುವ ನೀತಿಯಂತೆ ರಾಜ್ಯ ಸರ್ಕಾರವು ತನ್ನದೇ ಆದ ಸಾಂಸ್ಕೃತಿಕ ನೀತಿಯನ್ನು ಜಾರಿಗೆ ತರುವುದು ಅಗತ್ಯವಾಗಿದೆ~ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಜಾನಪದ ತಜ್ಞ ಗೊ.ರು.ಚನ್ನಬಸಪ್ಪ ಹೇಳಿದರು.
ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಜಾನಪದ ದಿನ, ವಿಶ್ವವಿದ್ಯಾಲಯ ಸಂಸ್ಥಾಪನಾ ದಿನ ಹಾಗೂ `ಹಣತೆ~ ವಿವಿ ವಾರ್ತಾ ಪತ್ರಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಎಚ್.ಜೆ.ಲಕ್ಕಪ್ಪಗೌಡ ಜಾನಪದ ಅಕಾಡೆಮಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ನೀತಿಯನ್ನು ರಚಿಸಿ ಕೊಟ್ಟಿದ್ದರು. ಆದರೆ ಸರ್ಕಾರ ಆ ಬಗ್ಗೆ ಗಮನ ಹರಿಸಲಿಲ್ಲ ಎಂದರು.
ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಚ್.ಜೆ.ಲಕ್ಕಪ್ಪಗೌಡ ಅವರು ಜಾನಪದ ವಿವಿಯ ವಾರ್ತಾ ಪತ್ರಿಕೆ `ಹಣತೆ~ ಬಿಡುಗಡೆ ಮಾಡಿದರು. ವಿ.ವಿ.ಕುಲಪತಿ ಪ್ರೊ.ಅಂಬಳಿಕೆ ಹಿರಿಯಣ್ಣ ಅಧ್ಯಕ್ಷತೆವಹಿಸಿದ್ದರು.