ಕೋಲಾರ: `ಪ್ರತಿಯೊಬ್ಬರೂ ಅಕ್ಷರಸ್ಥ ರಾದಾಗಲೇ ದೇಶದ ಅಭಿವೃದ್ಧಿ ಸಾಧ್ಯ~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರು ಪ್ರಕಾಶ್ ತಿಳಿಸಿದರು.
ತಾಲ್ಲೂಕಿನ ಜನಘಟ್ಟದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಲೋಕ ಶಿಕ್ಷಣ ಸಮಿತಿ ವತಿಯಿಂದ ಈಚೆಗೆ ಏರ್ಪಡಿಸಿದ್ದ ಮಾದರಿ ಲೋಕ ಶಿಕ್ಷಣ ಕೇಂದ್ರದ ಉದ್ಘಾಟನೆ ಮತ್ತು ವಿಶ್ವ ಸಾಕ್ಷರತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಮಾಜಿ ಸದಸ್ಯ ಮುನಿನಾರಾಯಣಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಡಿ.ಗೋವಿಂದಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಯಮ್ಮ, ಸದಸ್ಯ ಟಿ.ವಿ.ತಿಮ್ಮರಾಯಪ್ಪ, ಲೋಕ ಶಿಕ್ಷಣ ಸಮಿತಿ ವಿ.ನಾರಾಯಣಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಮುನಿರಾಜು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮುನಿಸ್ವಾಮಿ, ಬೆಗ್ಲಿ ಸೂರ್ಯಪ್ರಕಾಶ್ ಹಾಜರಿದ್ದರು.