ಸುಮಾರು 4 ಕಿ.ಮೀ. ವ್ಯಾಪ್ತಿಯ ಸಾಣೂರಿನ ಪ್ರಮುಖ ಸಂಪರ್ಕ ರಸ್ತೆಯನ್ನು ಮರುಡಾಂಬರೀಕರಣ ಮಾಡಿ, ಸುವ್ಯವಸ್ಥಿತವಾದ ಚರಂಡಿ ವ್ಯವಸ್ಥೆಯನ್ನು ರೂಪಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು, ಚುನಾವಣಾ ನೀತಿ ಸಹಿಂತೆ ಮುಕ್ತಾಯಗೊಂಡ ಕೂಡಲೇ ಸರ್ಕಾರದ ಅನುದಾನ ದೊರಕಿಸಲು ಆದ್ಯತೆಯ ಮೇರೆಗೆ ಶ್ರಮಿಸಲಾಗುವುದು ಎಂದೂ ಚುನಾವಣೆಯನ್ನು ಬಹಿಷ್ಕರಿಸದಿರಲು ವಿನಂತಿಸಿದರು. ಮನವೊಲಿಕೆ ಬಳಿಕ ಸ್ಥಳೀಯರು ಚಂದ್ರಶೇಖರ್ ನೇತೃತ್ವದಲ್ಲಿ ಚುನಾವಣಾ ಬಹಿಷ್ಕಾರದ ಫಲಕವನ್ನು ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ಮಿಯಾರು ಜಿಲ್ಲಾ ಪಂಚಾಯಿತಿ ಸದಸ್ಯ ಉದಯ ಎಸ್. ಕೋಟ್ಯಾನ್, ಸಾಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಕೋಟ್ಯಾನ್ಮಾಜಿ ಅಧ್ಯಕ್ಷ ನರಸಿಂಹ ಕಾಮತ್, ಪಂಚಾಯಿತಿ ಸದಸ್ಯ ಯುವರಾಜ್ ಜೈನ್, ದತ್ತಾತ್ರೇಯ ರಾವ್, ಏರ್ನಡ್ಕ ವಿಶ್ವನಾಥ ಶೆಟ್ಟಿ, ಕಾರ್ಕಳ ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್, ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ರಾಜೇಂದ್ರ ಬೇಕಲ್, ಸಾಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಶೆಣೈ ಇದ್ದರು.