ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧಕರ ಆತ್ಮಾಹುತಿ: ತನಿಖೆಗೆ ವಿಶೇಷ ತಂಡ ರಚನೆ

Last Updated 9 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಜನವಾಡ (ಬೀದರ್): ತಾಲ್ಲೂಕಿನ ಚೌಳಿ ಮಠದ ಮೂವರು ಸಾಧಕರ ಆತ್ಮಾಹುತಿ ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.

ಬೀದರ್ ಡಿವೈಎಸ್‌ಪಿ ವಿ.ಎನ್. ಜ್ಯೋತಿ ಅವರ ನೇತೃತ್ವದಲ್ಲಿ ರಚಿಸಿದ ತಂಡ ಈಗಾಗಲೇ ತನಿಖೆ ಕೈಗೆತ್ತಿಕೊಂಡಿದೆ.

ಮಠದಲ್ಲಿನ ಕ್ಯಾಮೆರಾ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಅದರಲ್ಲಿ ಆತ್ಮಾಹುತಿ ಬಗೆಗೆ ಖುದ್ದು ಸಾಧಕರ ಸಂದೇಶ ಇರುವುದು ದೃಢಪಟ್ಟಿದೆ. ಮೂವರು ಸಾಧಕರು ಸಾವಿಗೆ ಮೊದಲು ಬರೆದಿಟ್ಟಿದ್ದ ಪತ್ರದಲ್ಲಿ ಉಲ್ಲೇಖಿಸಿರುವ ಸಂಗತಿಗಳೇ ಕ್ಯಾಮೆರಾದಲ್ಲಿ ಇವೆ ಎಂದು ಬೀದರ್ ಗ್ರಾಮೀಣ ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಆನಂದ ಕಬ್ಬೂರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT