ಬೆಂಗಳೂರು: `ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತಿದ್ದ ಜ್ಯೋತಿಬಾ ಪುಲೆ ಅವರು ಶೂದ್ರರು ಶಿಕ್ಷಣ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು~ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಸ್ಮರಿಸಿದರು.
ಬಹುಜನ ಸಮಾಜ ಪಕ್ಷವು ನಗರದಲ್ಲಿ ಸೋಮವಾರ ಆಯೋಜಿಸಿದ್ದ ಜ್ಯೋತಿಬಾ ಪುಲೆ ಅವರ 185ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ವಿದ್ಯೆಯಿಲ್ಲದೇ ಶೂದ್ರರು ಸಂಪತ್ತು ಮತ್ತು ಬುದ್ದಿ ಎರಡನ್ನು ಕಳೆದುಕೊಂಡರು. ಇಂದು ಹಿಂದುಳಿದ ವರ್ಗದವರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿರುವುದೇ ಅವರಿಗೆ ದೊರೆತಿರುವ ಶಿಕ್ಷಣದಿಂದ~ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಬಿ.ಕಮಲನಾಭನ್, ರಾಜ್ಯ ಕಾರ್ಯದರ್ಶಿಗಳಾದ ವಿ.ಮುನಿಸ್ವಾಮಿ, ಚಿಕ್ಕಣ್ಣ , ಹೆಣ್ಣೂರು ಲಕ್ಷ್ಮಿನಾರಾಯಣ ಇತರರು ಉಪಸ್ಥಿತರಿದ್ದರು.