ನವದೆಹಲಿ (ಐಎಎನ್ಎಸ್): ಚಲಿಸುತ್ತಿದ್ದ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ 23ರ ಹರೆಯದ ಅರೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ದಾಳಿಯಲ್ಲಿ ಷಾಮೀಲಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನೂರಾರು ಮಂದಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಶುಕ್ರವಾರ ಕೇಂದ್ರ ದೆಹಲಿಯ ರೈಸೀನಾ ಹಿಲ್ಸ್ ನಲ್ಲಿ ಇರುವ ರಾಷ್ಟ್ರಪತಿ ಭವನದೆಡೆಗೆ ಮೆರವಣಿಗೆ ನಡೆಸಿದರು.