ವಿಮೆ ಸದಾ ಚಾಲ್ತಿಯಲ್ಲಿರುವಂತೆ ಗಮನಹರಿಸಿ ಎಂದರು. ಕುಡಿದು ವಾಹನ ಚಾಲನೆ ಮಾಡುವವರಿಗೆ ಹಾಗೂ ಬೈಕುಗಳಲ್ಲಿ ಮೂವರು ಸಂಚರಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಸಬ್ಇನ್ಸ್ಪೆಕ್ಟರ್ ಪಿ.ಜಗದೀಶ್ ಮಾತನಾಡಿ, ಖಾಸಗಿ ಮತ್ತು ಕೆಎಸ್ಆರ್ಟಿಸಿ ಬಸ್ಸುಗಳ ಚಾಲಕರು ನಿಗದಿತ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಬೇಕು, ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದರು.
ಮುಖಂಡ ಎ.ಪಿ.ಪ್ರಸನ್ನ ಮಾತನಾಡಿ, ಸಂಜೆ ವೇಳೆ ಭಾರತೀ ಕಾಲೇಜು ಬಳಿ ಅಪಾರ ಜನಸಂದಣಿ ಇರುತ್ತದೆ. ಚಾಮ್ಷುಗರ್ಸ್ ಹಾಗೂ ಭಾರತೀ ಕಾಲೇಜಿನಿಂದ ಒಮ್ಮೆಲೆ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜಿನಿಂದ ಹೊರಬರುವ ಕಾರಣ ಅಲ್ಲಿ ವಾಹನ ಸಂಚಾರಕ್ಕೆ ತುಂಬಾ ಅಡ್ಡಿ ಉಂಟಾಗುತ್ತದೆ.
ಈ ನಿಟ್ಟಿನಲ್ಲಿ ಅಲ್ಲಿಗೆ ಸಂಜೆ ವೇಳೆ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಮತ್ತು ಆಲಭುಜನಹಳ್ಳಿ ತಿರುವಿನಲ್ಲಿ ಆಟೊಗಳು ನಿಲ್ಲದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಕೆ.ಟಿ.ಶ್ರೀನಿವಾಸ್, ರೋಟರಿ ಮಾಜಿ ಅಧ್ಯಕ್ಷ ಬಿ.ಬಸವರಾಜು, ಭಾರತ ವಿಕಾಸ ಪರಿಷದ್ ಮಾಜಿ ಅಧ್ಯಕ್ಷ ವೈ.ಬಿ.ಶ್ರೀಕಂಠಸ್ವಾಮಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲೇಶ್, ವರ್ತಕರ ಸಂಘದ ಅಧ್ಯಕ್ಷ ರಾಮೇಗೌಡ, ರವೀಂದ್ರ, ಶಿವಲಿಂಗೇಗೌಡ, ರಾಜೇಂದ್ರ, ಪೇದೆಗಳಾದ ವೆಂಕಟೇಶ್, ತೈಲೂರು ಸಿದ್ದರಾಜು, ವಿಜಯ್ಕುಮಾರ್ ಇದ್ದರು.