ಜಗಳೂರು (ದಾವಣಗೆರೆ ಜಿಲ್ಲೆ): ಮಳೆ ಇಲ್ಲದೇ ಬೆಳೆ ಹಾನಿಯಿಂದ ಕಂಗಾಲಾದ ರೈತನೊಬ್ಬ ಹೊಲದಲ್ಲೇ ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಅಣಬೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಬಿ.ಎಂ. ನಾಗಯ್ಯ(56) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗ್ರಾಮದ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಲ್ಲಿ ರೂ 50 ಸಾವಿರ ಹಾಗೂ ಖಾಸಗಿಯಾಗಿ ಸಾಲ ಪಡೆದು ಐದು ಎಕರೆಯಲ್ಲಿ ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆದಿದ್ದರು.
ಆದರೆ ಮಳೆಯ ಕೊರತೆಯಿಂದ ಬೆಳೆ ಸಂಪೂರ್ಣ ಒಣಗಿ ನಿಂತಿದೆ. ಇದರಿಂದ ಆತಂಕಕ್ಕೆ ಒಳಗಾಗಿ ಹೊಲದಲ್ಲಿರುವ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ ಸಿದ್ದೇಶ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.