ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಯವ ಗೊಬ್ಬರ ಬಳಕೆಗೆ ಸಲಹೆ

Last Updated 10 ಜೂನ್ 2011, 7:05 IST
ಅಕ್ಷರ ಗಾತ್ರ

ಗದಗ: ರೈತರ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಸವಲತ್ತುಗಳನ್ನು ನೀಡಿದೆ. ರೈತರು ಪ್ರಾಮಾಣಿಕವಾಗಿ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚಂಬವ್ವ ಪಾಟೀಲ ಸಲಹೆ ನೀಡಿದರು.

ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ  ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ಬೀಜ ವಿತರಣೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರು ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಲು ಸಾವಯವ ಗೊಬ್ಬರ ಬಳಸಲು ಮುಂದಾಗಬೇಕು.

ರಾಸಾಯನಿಕ ಗೊಬ್ಬರವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ರೈತರಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.

ಎಪಿಎಂಸಿ ಸದಸ್ಯ ಎಚ್.ಕೆ. ಪಾಟೀಲ ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರಕಿಸಿ ಕೊಡಲು ಪ್ರಯತ್ನಿಸಲಾಗು ವುದು ಎಂದರು.

ಜಂಟಿ ಕೃಷಿ ನಿರ್ದೇಶಕ ಎನ್.ವಿ. ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗವ್ವ ಮಜ್ಜಿಗುಡ್ಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಅನಸೂಯಾ ಗುದಗಿ, ಸದಸ್ಯರಾದ ದಾನಪ್ಪ ಯಾವಗಲ್, ಶೇಖರಯ್ಯ ಗಂಧದ, ಬಿ.ಎಸ್. ಮೂಲಿಮನಿ, ಕರಬಸಪ್ಪ ಕರಿಯಲ್ಲಪ್ಪನವರ, ಕುಬೇರಪ್ಪ ಬಡಿಗೇರ, ಶಾಂತವ್ವ ನಂದಪ್ಪನವರ, ಶಾಂತಯ್ಯ ಗಂಧದ, ಶಿವಪುತ್ರಪ್ಪ ಬೂದಿಹಾಳ ಮತ್ತಿತರರು ಹಾಜರಿದ್ದರು.

ಎಚ್.ಆರ್. ನಾಗರಾಜ ಸ್ವಾಗತಿಸಿ ದರು. ಕೆ.ಐ. ಕುರಗೋಡಿ ಕಾರ್ಯಕ್ರಮ ನಿರೂಪಿಸಿದರು. ಸಿ.ಪಿ. ಮೂಡಲತೋಟ ವಂದಿಸಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT