ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿರ ಸುಧಾರಸಕ್ಕೆ 1000 ದಿನ

Last Updated 17 ಡಿಸೆಂಬರ್ 2013, 8:34 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಕೈವಾರದ ಯೋಗಿ ನಾರೇಯಣ ಮಠದ ಸಾಂಸ್ಕೃತಿಕ ವೇದಿಕೆಯಾದ ನಾದಸುಧಾರಸ ಕಾರ್ಯಕ್ರಮ ಆರಂಭವಾಗಿ ಸೋಮವಾರಕ್ಕೆ  ಒಂದು ಸಾವಿರ ದಿನವಾದ ಹಿನ್ನೆಲೆಯಲ್ಲಿ ಸಂಚಾಲಕ ಬಾಲಕೃಷ್ಣ ಭಾಗವತರ್‌ ನೇತೃತ್ವದಲ್ಲಿ ಸಮೂಹ ಗಾಯನ ಕಾರ್ಯಕ್ರಮ ನಡೆಯಿತು.

ಸಂಗೀತ, ಕಲೆ, ಸಾಹಿತ್ಯ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಅಧ್ಯಾತ್ಮ ತತ್ವಗಳ ಜತೆಗೆ ಕಲೆಯ ಅವಸಾನವನ್ನು ತಡೆಗಟ್ಟಿ, ಬೆಳೆಯಲು ಪ್ರೋತ್ಸಾಹ ನೀಡುವ ಸಲುವಾಗಿ ನಾದ­ಸುಧಾರಸ ವೇದಿಕೆಯನ್ನು ಹುಟ್ಟುಹಾಕಲಾಗಿದೆ. ರಾಷ್ಟ್ರೀಯ ಕಲಾವಿದ­ರೊಂದಿಗೆ ಸ್ಥಳೀಯ ಕಲಾವಿದರಿಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ಬಾಲಕೃಷ್ಣ ಭಾಗವತರ್‌ ತಿಳಿಸಿದರು.

ನಾದೋಪಾಸನೆಯ ಮೂಲಕ ಅಧ್ಯಾತ್ಮ ವಿದ್ಯೆಯನ್ನು ಮನಸ್ಸಿಗೆ ನಾಟುವಂತೆ ಪ್ರಸರಿಸುವುದು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್‌.ಜಯರಾಂ ಹಾಗೂ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದರು.

ವಿದ್ವಾನ್‌ ಮಾಧವದಾಸ್‌ ಮಾತನಾಡಿದರು. ಕಲಾವಿದರಾದ ನಾರಾಯಣಸ್ವಾಮಿ, ಶ್ರೀಹರಿಶರ್ಮ, ರಮೇಶಬಾಬು, ಟಿ.ಎಲ್‌.ಆನಂದ್‌, ಎಸ್‌.ಎನ್‌.­ಜಗದೀಶ್‌ಕುಮಾರ್‌, ನಾರಾಯಣಪ್ಪ, ಹೇಮಕುಮಾರ್‌, ವೆಂಕಟ­ರಮಣಯ್ಯ, ಸೂರ್ಯನಾರಾಯಣಾಚಾರಿ  ಮತ್ತಿತರರು ಸಮೂಹ ಗಾಯನದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT