ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಜಾತ್ರೆಗೆ ಚಾಲನೆ

Last Updated 7 ಜನವರಿ 2014, 10:56 IST
ಅಕ್ಷರ ಗಾತ್ರ

ಮಡಿಕೇರಿ: ಮಂಜಿನ ನಡುವೆ ಮದುವಣಗಿತ್ತಿಯಂತೆ ಶೃಂಗಾರಗೊಂಡು ನಿಂತಿದ್ದ ನಿಸರ್ಗ ರಮಣೀಯ ನಗರಿಯಲ್ಲಿ ಮಂಗಳವಾರ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯ ಮೂಲಕ ಚಾಲನೆ ದೊರೆಯಿತು.

ನಗರದ ಗಾಂಧಿ ಮೈದಾನದಿಂದ ಬೆಳಿಗ್ಗೆ ಆರಂಭವಾದ ಸಮ್ಮೇಳನಾಧ್ಯಕ್ಷ ನಾ.ಡಿಸೋಜ ಅವರ ಮೆರವಣಿಗೆಯಲ್ಲಿ ನಾಡಿನ ಮೂಲೆ ಮೂಲೆಯಿಂದ ಬಂದಿದ್ದ ಸುಮಾರು 80 ಕಲಾತಂಡಗಳು ಸೇರಿದಂತೆ ಸ್ತಬ್ಧ ಚಿತ್ರಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು.

32 ವರ್ಷಗಳ ನಂತರ ಮೂರನೇಯ ಬಾರಿಗೆ ನಡೆಯುತ್ತಿರುವ ಈ ಅಕ್ಷರ ಜಾತ್ರೆಗೆ ಸಮರೋಪಾದಿಯಲ್ಲಿ ಸಿದ್ಧಗೊಂಡಿರುವ ನಗರದಲ್ಲಿ ಎಲ್ಲೇಡೆ ಕನ್ನಡದ ಕಂಪು ಮನೆಮಾಡಿದೆ. ಡಿಸೋಜ ಅವರನ್ನು ಹೊತ್ತ ಸಾಹಿತ್ಯರಥವು ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಕಾಲೇಜಿನ ಮೈದಾನದಲ್ಲಿರುವ ಸಮ್ಮೇಳನದ ಪ್ರಧಾನ ವೇದಿಕೆ ತಲುಪಿತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT