ಗಂಗಾವತಿ (ಕೊಪ್ಪಳ ಜಿಲ್ಲೆ): ನ. 18, 19 ಮತ್ತು 20ರಂದು ನಡೆಯಬೇಕಿದ್ದ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಡಿಸೆಂಬರ್ 9 ಕ್ಕೆ ಮುಂದೂಡಲಾಗಿದೆ~ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ಡಾ. ಆರ್.ಕೆ. ನಲ್ಲೂರು ಪ್ರಸಾದ್ ಪ್ರಕಟಿಸಿದರು. ಸಮ್ಮೇಳನದ ಅಧ್ಯಕ್ಷರನ್ನು ನವೆಂಬರ್ ಮೊದಲ ವಾರದಲ್ಲಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.