ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗ್, ಚಿದಂಬರಂ ದೋಷಮುಕ್ತ

Last Updated 18 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದ ವಿಚಾರಣೆ ನಡೆಸಿದ ಜಂಟಿ ಸಂಸದೀಯ ಸಮಿತಿಯು (ಜೆಪಿಸಿ), ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ದೋಷಮುಕ್ತಗೊಳಿಸಿದೆ.

ಅಲ್ಲದೇ, ಈ ಹಗರಣದಿಂದ ರಾಷ್ಟ್ರದ ಬೊಕ್ಕಸಕ್ಕೆ 1.76 ಲಕ್ಷ ಕೋಟಿ ರೂಪಾಯಿಗಳ ನಷ್ಟವಾಗಿದೆ ಎಂಬ ಮಹಾಲೇಖಪಾಲರ ಅಂದಾಜಿಗೆ ಜೆಪಿಸಿ ತನ್ನ ಕರಡು ವರದಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

ತರಂಗಾಂತರ ಹಂಚಿಕೆಗೆ ನಿಗದಿ ಮಾಡಿದ್ದ ಕಡೆಯ ದಿನಾಂಕವನ್ನು ಬದಲಾಯಿಸಿದ್ದು ಆಗ ದೂರಸಂಪರ್ಕ ಸಚಿವರಾಗಿದ್ದ ಎ.ರಾಜಾ ಅವರು. ತರಂಗಾಂತರ ಹಂಚಿಕೆಯಲ್ಲಿ ಅಕ್ರಮ ನಡೆಯಲು ರಾಜಾ ಅವರ ನಿರ್ಧಾರವೇ ಕಾರಣ ಎಂದೂ ಜೆಪಿಸಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT