ಸಲ್ದಾನ ವೃತ್ತದ ಬಳಿಯಿಂದ ಮೆರಣಿಗೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆ ಕೂಗಿದರು.
ಉನ್ನತ ಶಿಕ್ಷಣವನ್ನು ಸುಲಭವಾಗಿ ಪಡೆಯಲು ಅನುಕೂಲವಾಗಿದ್ದ ವ್ಯವಸ್ಥೆಯನ್ನು ಹಾಳು ಮಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಹುನ್ನಾರಕ್ಕೆ ಸರ್ಕಾರ ಬಲಿಯಾಗಿರುವುದು ಖಂಡನೀಯ ಎಂದು ವಿದ್ಯಾರ್ಥಿ ಮುಖಂಡರು ಆರೋಪಿಸಿದರು. ಸರ್ಕಾರಕ್ಕೆ ಬಡ ವಿದ್ಯಾರ್ಥಿಗಳ ಮೇಲೆ ನಿಜವಾದ ಅನುಕಂಪವಿದ್ದರೆ ಕೂಡಲೇ ಹಳೇ ಪದ್ಧತಿಯನ್ನೇ ಜಾರಿಗೊಳಿಸಬೇಕು ಎಂದರು.
ನಂತರ ನಾಡಕಚೇರಿಯಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಮುಖಂಡರಾದ ಸುನಿಲ್ಕುಮಾರ್, ನವೀನ್, ಅಭಿಷೇಕ್, ಹನುಮಂತು, ದಿಲೀಪ್, ಶಿವ, ಸುಬ್ರಹ್ಮಣಿ ಮತ್ತಿತರರು ಇದ್ದರು.