ಬೆಂಗಳೂರು: ವೃತ್ತಿಪರ ಕೋರ್ಸ್ಗಳಿಗೆ ಈಗಾಗಲೇ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಹಾಗೂ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಮಂಗಳವಾರದವರೆಗೂ (ಜುಲೈ 16) ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಈ ಮುಂಚೆ ಜುಲೈ 15 ಕೊನೆಯ ದಿನವಾಗಿತ್ತು. ಆದರೆ, ಕೆಲವು ವಿದ್ಯಾರ್ಥಿಗಳಿಗೆ ಇನ್ನೂ ದಾಖಲಾತಿ ಪತ್ರ ಡೌನ್ಲೋಡ್ ಮಾಡಿಕೊಳ್ಳಲು, ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣ ಮಂಗಳವಾರದವರೆಗೂ ಕಾಲಾವಕಾಶ ನೀಡಲಾಗಿದೆ.
23,485 ವಿದ್ಯಾರ್ಥಿಗಳು ಇಂಡಿಯನ್ ಬ್ಯಾಂಕ್ ಮೂಲಕ ಶುಲ್ಕ ಪಾವತಿಸಿದ್ದಾರೆ. 9,460 ವಿದ್ಯಾರ್ಥಿಗಳು ನೆಟ್ ಬ್ಯಾಂಕಿಂಗ್, ಇ - ಪೋರ್ಟಲ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಹಾಗೂ 15,548 ವಿದ್ಯಾರ್ಥಿಗಳು ಆರ್ಟಿಜಿಎಸ್/ ನೆಫ್ಟ್ ಮೂಲಕ ಹಣ ಪಾವತಿಸಿದ್ದಾರೆ.
ಫಲಿತಾಂಶ: ಎಂಜಿನಿಯರಿಂಗ್ 3ನೇ ಸೆಮಿಸ್ಟ್ರ್ ಪ್ರವೇಶಕ್ಕೆ ಡಿಪ್ಲೊಮಾ ಅಭ್ಯರ್ಥಿಗಳಿಗೆ ಕಳೆದ ತಿಂಗಳ 30ರಂದ ನಡೆದ ಸಿಇಟಿ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಸಂಜೆ 5ಕ್ಕೆ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.