ಉಡುಪಿ: ರಾಜ್ಯದ ಪದವಿ ಪೂರ್ವ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ದೂರದರ್ಶನದ ಮೂಲಕ ತರಬೇತಿ ನೀಡುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ರೂಪಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಸಚಿವ ವಿ.ಎಸ್.ಆಚಾರ್ಯ ಅವರು ಹೇಳಿದರು.
ನಗರದ ಅಜ್ಜರಕಾಡು ಮೈದಾನದಲ್ಲಿ ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಒಂದು ವಾರದೊಳಗೆ ಈ ಕಾರ್ಯಕ್ರಮದ ಪ್ರಸಾರ ಆರಂಭಗೊಳ್ಳಲಿದೆ ಎಂದು ಹೇಳಿದರು.
`ಸರ್ವಶಿಕ್ಷಣ ಅಭಿಯಾನದ ಕಾರ್ಯಚಟುವಟಿಕೆಗಳಿಗಾಗಿ ಈವರೆಗೆ ರೂ. 7.98 ಕೋಟಿ ವೆಚ್ಚ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸೈಕಲ್ ವಿತರಣೆ ಯೋಜನೆಯನ್ನು ಇನ್ನಷ್ಟು ಉತ್ತಮಪಡಿಸಿ ಮುಂದುವರಿಸಲಾಗುತ್ತಿದೆ~ ಎಂದರು.