ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಪತ್ರ ತೃಪ್ತಿ ತಂದಿಲ್ಲ: ರಾಜ್ಯಪಾಲ

Last Updated 21 ಡಿಸೆಂಬರ್ 2010, 5:30 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಗಣಿಗಾರಿಕೆ ಕುರಿತಂತೆ ಮುಖ್ಯಮಂತ್ರಿಗಳು ಬರೆದ ಪತ್ರ ನನಗೆ ತೃಪ್ತಿ ತಂದಿಲ್ಲ’ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸೋಮವಾರ ತಿಳಿಸಿದರು.

ರಾಜಭವನದಲ್ಲಿ ನಡೆದ ‘ದಿ ರಾಜಭವನ್ ಕರ್ನಾಟಕ ಥ್ರೂ ದಿ ಏಜಸ್’ ಪುಸ್ತಕ ಬಿಡುಗಡೆ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಕೇವಲ ಎರಡು ಸಾಲಿನ ಉತ್ತರವಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ ಅವರಿಂದ ಉತ್ತರ ಲಭಿಸಿಲ್ಲ. ಅಕ್ರಮ ಗಣಿಗಾರಿಕೆ ತಡೆಗೆ ರಾಜ್ಯಪಾಲರ ಸಹಕಾರ ಬೇಕು ಎಂದು ಹೇಳುವ ಅವರು  ಒಮ್ಮೆಯೂ ನನ್ನೊಂದಿಗೆ ಚರ್ಚಿಸಿಲ್ಲ’ ಎಂದರು.

‘ಕೋಟ್ಯಂತರ ರೂಪಾಯಿ ಸಾರ್ವಜನಿಕರ ಹಣವನ್ನು ಸಚಿವರು  ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ. ಇದನ್ನೇ ನಾನು ಪ್ರಶ್ನಿಸುತ್ತಿದ್ದೇನೆ’ ಎಂದರು. ‘ನನ್ನನ್ನು ಕಾಂಗ್ರೆಸ್ ವ್ಯಕ್ತಿ, ಪಕ್ಷಪಾತಿ ಎಂದು ಟೀಕಿಸಿರುವುದು ಗಮನಕ್ಕೆ ಬಂದಿದೆ. ಹಾಗೆ ಟೀಕಿಸುವವರು ಟೀಕಿಸುತ್ತಲೇ ಇರಲಿ. ಜನರಿಗೆ ನ್ಯಾಯ ಅನ್ಯಾಯದ ಬಗ್ಗೆ ಅರಿವಿದೆ. ಕಾನೂನಿನ ವಿರುದ್ಧವಾಗಿ ಯಾರೂ ಏನನ್ನೂ ಮಾಡಲು ಸಾಧ್ಯವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT