ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂಗೆ ಕಪ್ಪುಬಾವುಟ ಪ್ರದರ್ಶಿಸಲು ನಿರ್ಧಾರ

13ರಂದು ಕೆಪಿಎಸ್‌ಸಿ ವಿರುದ್ಧ ಲೋಕಸತ್ತಾ ಪ್ರತಿಭಟನೆ
Last Updated 9 ಜನವರಿ 2014, 20:06 IST
ಅಕ್ಷರ ಗಾತ್ರ

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕ­ಸೇವಾ ಆಯೋಗ ನಡೆಸಿದ ಪರೀಕ್ಷೆಯ ಅಕ್ರಮ­ದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳು­ವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪುಬಾವುಟ ಪ್ರದರ್ಶನ ಮಾಡಲು ಲೋಕಸತ್ತಾ ಪಕ್ಷ ತೀರ್ಮಾನಿಸಿದೆ.

ಈ ವಿಷಯದಲ್ಲಿ ಮಾಡುತ್ತಿರುವ ಹೋರಾಟಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಭ್ರಷ್ಟರನ್ನು ರಕ್ಷಿಸುವುದು ಕೂಡ ಭ್ರಷ್ಟಾ­ಚಾರ ಆಗುತ್ತದೆ ಎಂದು ಲೋಕಸತ್ತಾ ಪಕ್ಷದ ಪದಾಧಿ­ಕಾರಿ­ಗಳು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಇದೇ 13ರಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸ­ಲಾಗು­ವುದು ಎಂದು ಪಕ್ಷದ ಕಾರ್ಯಕಾರಿಣಿ ಸದಸ್ಯೆ ಶಾಂತಲಾ ದಾಮ್ಲೆ, ಕಾರ್ಯದರ್ಶಿ ಸಿ.ಎನ್‌.ದೀಪಕ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT