ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎನ್‌ಆರ್, ಓಎಲ್‌ಎನ್‌ಗೆ ಪ್ರಶಸ್ತಿ

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡದ ಹಿರಿಯ ವಿಮರ್ಶಕರಾದ ಸಿ.ಎನ್. ರಾಮಚಂದ್ರನ್  ಮತ್ತು ಓ.ಎಲ್. ನಾಗಭೂಷಣಸ್ವಾಮಿ ಅವರು 2012ರ `ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ವಿಮರ್ಶೆಗೆ ಈ ಇಬ್ಬರು ಹಿರಿಯರು ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು `ಡಾ. ಜಿ.ಎಸ್. ಎಸ್. ವಿಶ್ವಸ್ತ ಮಂಡಲಿ' ತಿಳಿಸಿದೆ.

ಪ್ರಶಸ್ತಿಯು ತಲಾ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ 2013ರ ಫೆಬ್ರುವರಿ 7ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್. ಅನಂತಮೂರ್ತಿ ಅಧ್ಯಕ್ಷತೆ ವಹಿಸಿ, ಪ್ರಶಸ್ತಿ ಪ್ರದಾನ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT