ನವದೆಹಲಿ (ಪಿಟಿಐ): ಕನ್ನಡದ ಖ್ಯಾತ ವಿಮರ್ಶಕ ಡಾ. ಸಿ.ಎನ್. ರಾಮಚಂದ್ರನ್ ಅವರ ‘ಆಖ್ಯಾನ–ವ್ಯಾಖ್ಯಾನ’ ವಿಮರ್ಶಾ ಕೃತಿ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ಹಿಂದಿ ಸಿನಿಮಾ ಗೀತ ರಚನೆಕಾರ ಜಾವೇದ್ ಅಖ್ತರ್, ಹಿಂದಿ ಕಾದಂಬರಿಕಾರ್ತಿ ಮೃದುಲಾ ಗರ್ಗ್ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಸೇರಿದ್ದಾರೆ. ಮಾರ್ಚ್ 11ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿ ಕೆ. ಶ್ರೀನಿವಾಸರಾವ್ ತಿಳಿಸಿದ್ದಾರೆ.