ಮಸೂದೆ ಮಂಡನೆಯನ್ನು ಮುಂದೂಡಿ ಕೃಷ್ಣಾ ನ್ಯಾಯ ಮಂಡಳಿ ತೀರ್ಪಿನ ಚರ್ಚೆಗೆ ಅವಕಾಶ ನೀಡಬೇಕು' ಎಂದು ಒತ್ತಾಯಿಸಿದರು. 'ಕೃಷ್ಣಾ ವಿಷಯದಲ್ಲಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ರಾಜಕೀಯ ಮಾಡುತ್ತಿದೆ' ಎಂದು ಅವರು ಆರೋಪಿಸಿದರು. 'ಮಸೂದೆ ಮಂಡನೆಗಿಂತ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋದು ಮುಖ್ಯ' ಎಂದರು.
ಇದಕ್ಕೂ ಮೊದಲು ಜೆಡಿಎಸ್ ನ ಚೆಲುವರಾಯಸ್ವಾಮಿ, 'ನಮ್ಮ ನಾಯಕರು ಆಡಳಿತ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಪತ್ರಿಕೆಗಳಲ್ಲಿ ಬರುತ್ತಿವೆ. ಆದರೆ ಅವರು ಜನರ ಹಿತದೃಷ್ಟಿಯಿಂದ ಸುಮ್ಮನಿದ್ದಾರೆ' ಎಂದು ಹೇಳಿದ್ದರು.