ಸ್ವಗ್ರಾಮವಾದ ಸಿದ್ದರಾಮನಹುಂಡಿಗೆ ಬೆಳಿಗ್ಗೆ ತೆರಳಿದ ಅವರು ಕುಲದೇವರು ಸಿದ್ದರಾಮೇಶ್ವರನಿಗೆ ಪೂಜೆ ಸಲ್ಲಿಸಿದರು. ಪುತ್ರ ರಾಕೇಶ್ ಸಿದ್ದರಾಮಯ್ಯ ಸೇರಿದಂತೆ ಕುಟುಂಬದ ಸದಸ್ಯರು ಹಾಜರಿದ್ದರು. ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಆ ಬಳಿಕ ಅಪಾರ ಬೆಂಬಲಿಗರೊಂದಿಗೆ ನಂಜನಗೂಡಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಯಾರು ಎಷ್ಟೇ ಹಣದ ಹೊಳೆ ಹರಿಸಿದರೂ ನನ್ನ ಗೆಲುವು ಖಚಿತ. ಜನ ಬಲದ ಮುಂದೆ ಹಣ ಬಲ ನಡೆಯುವುದಿಲ್ಲ. ಜನರ ಸಹಕಾರ ಚೆನ್ನಾಗಿದ್ದು, ಭಾರಿ ಅಂತರದ ಗೆಲ್ಲುತ್ತೇನೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರನಟ ಅಂಬರೀಷ್ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, `ಹೈಕಮಾಂಡ್ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ.