ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆಯನ್ನು ವಿರೋಧಿಸಿ ಸಿಪಿಐ (ಎಂ) ಕಾರ್ಯಕರ್ತರು ನಗರದ ವಿವಿಧ ಕಡೆಗಳಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಕೆ.ಆರ್.ಪುರ, ಬನಶಂಕರಿ, ಬೊಮ್ಮಸಂದ್ರ, ಪೀಣ್ಯ ಮತ್ತು ಯಲಹಂಕದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಸರ್ಕಾರದ ಪ್ರತಿಕೃತಿಗಳನ್ನು ದಹಿಸಿದರು.ಪುರಭವನದ ಎದುರು ಮಾತನಾಡಿದ ಸಿಪಿಐ (ಎಂ) ರಾಜ್ಯ ಸಮಿತಿ ಸದಸ್ಯ ಉಮೇಶ್, `
ತೈಲ ಕಂಪೆನಿಗಳು ಲಾಭದಲ್ಲಿದ್ದರೂ, ನಷ್ಟದ ಲೆಕ್ಕ ತೋರಿಸಿ ಸರ್ಕಾರ ಜನತೆಗೆ ಅನ್ಯಾಯ ಮಾಡಲು ಮುಂದಾಗಿದೆ~ ಎಂದು ಆರೋಪಿಸಿದರು.ರಾಜ್ಯ ಕೇಂದ್ರದ ಮೇಲೆ ಆರೋಪ ಹೊರಿಸುತ್ತಾ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ~ ಎಂದರು.