ಹೈದರಾಬಾದ್ (ಐಎಎನ್ಎಸ್): ವೈಎಸ್ಆರ್ ಕಾಂಗ್ರೆಸ್ ನಾಯಕ ವೈ.ಎಸ್. ಜಗನ್ಮೋಹನ್ ರೆಡ್ಡಿ ಭಾಗಿಯಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಮಂಗಳವಾರ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಮೂರು ಆರೋಪ ಪಟ್ಟಿಗಳ ಪೈಕಿ ಒಂದರಲ್ಲಿ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಹೆಸರನ್ನು ಪ್ರಸ್ತಾಪಿಸಲಾಗಿದೆ.
ಇಂಡಿಯನ್ ಸಿಮೆಂಟ್ಸಗೆ ಸಂಬಂಧಿಸಿದ ಭ್ರಷ್ಟಾಚಾರದ ಈ ಆರೋಪಟ್ಟಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸನ್, ವ್ಯವಸ್ಥಾಪಕ ನಿರ್ದೇಶಕರನ್ನು ಮೂರನೇ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.