ಮಂಗಳೂರು: ‘ಮಂಡ್ಯ ಮತ್ತು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದ ಹಣ ದುರುಪಯೋಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಗರಾಭಿವೃದ್ಧಿ ಇಲಾಖೆ ಶಿಫಾರಸು ಮಾಡಿದೆ. ಈ ಕುರಿತ ಕಡತವನ್ನು ಗೃಹ ಸಚಿವರಿಗೆ ಕಳುಹಿಸಿಕೊಡಲಾಗಿದೆ’ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಂಗಳವಾರ ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿದರು.
‘ಈ ಎರಡೂ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದ ಅವ್ಯವಹಾರವು ರೂ. 2 ಕೋಟಿಗೂ ಹೆಚ್ಚಿನದು. ಹಾಗಾಗಿ ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಇಲಾಖೆ ಶಿಫಾರಸು ಮಾಡಿದೆ. ಪ್ರಕರಣದ ಆರೋಪಿಗಳನ್ನು ಅಮಾನತು ಮಾಡಿದ್ದು, ಅವರು ಜೈಲಿನಲ್ಲಿದ್ದಾರೆ’ ಎಂದು ಸಚಿವರು ತಿಳಿಸಿದರು.