ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ದುರ್ಬಳಕೆ: ಮುಲಾಯಂ ಆಕ್ರೋಶ

Last Updated 3 ಏಪ್ರಿಲ್ 2013, 17:50 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಸಿಬಿಐ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದಾಗಿ ಅದರ ವಿರುದ್ಧ ಹೋರಾಟ ಕಷ್ಟಕರ ಎನಿಸಿದೆ ಎಂದು ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಮುಲಾಯಂ ಸಿಂಗ್ ಯಾದವ್ ಕಿಡಿಕಾರಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಲಯಂ, `ಸರ್ಕಾರದ ವಿರುದ್ಧ ಸಂಘರ್ಷ ನಡೆಸುವುದು ಅಷ್ಟು ಸುಲಭವಲ್ಲ, ಅದಕ್ಕೆ ಸಾವಿರಾರು ಕೈಗಳಿದ್ದು ಯಾರನ್ನಾದರೂ ಜೈಲಿಗೆ ಅಟ್ಟಲು ಸಿಬಿಐ ಅನ್ನು ಬಳಕೆ ಮಾಡಿಕೊಳ್ಳುತ್ತಿದೆ' ಎಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

`ಬೆದರಿಕೆ ತಂತ್ರ ಅನುಸರಿಸುವ ಮೂಲಕ ಕಾಂಗ್ರೆಸ್ ಬೆಂಬಲ ಗಿಟ್ಟಿಸಲು ಪ್ರಯತ್ನಿಸುತ್ತಿದೆ' ಎಂದು ಅವರುಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT