ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಮಾಂಧ್ರ: ಮುಂದುವರಿದ ಪ್ರತಿಭಟನೆ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಆಂಧ್ರಪ್ರದೇಶದ ಸೀಮಾಂಧ್ರದಲ್ಲಿ ನಡೆ ಯುತ್ತಿರುವ ಪ್ರತಿಭಟನೆ ಸೋಮವಾರ ಆರನೇ ದಿನಕ್ಕೆ ಕಾಲಿಟ್ಟಿದೆ.

ಆಂಧ್ರದ ಕರಾವಳಿ, ರಾಯಲಸೀಮಾ ಭಾಗದ ಜಿಲ್ಲೆಗಳಲ್ಲಿ ಯುಪಿಎ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ, ಮೆರವಣಿಗೆ ಹಾಗೂ ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು, ಆಂಧ್ರವನ್ನು ವಿಭಜಿಸದಂತೆ ಆಗ್ರಹಿಸಿದರು.

ವಿಶಾಖಪಟ್ಟಣ, ಚಿತ್ತೂರು, ಕರ್ನೂಲು, ವಿಜಯವಾಡ, ತಿರುಪತಿ, ಅನಂತಪುರ, ಮದ್ದಿಲ ಪೇಲಂ, ಅನಕಪಲ್ಲಿ ಹಾಗೂ ಗಜುವಾಕಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕೆಲವೆಡೆ ಪ್ರತಿಭಟನಾಕಾರರು ರಸ್ತೆಯಲ್ಲಿ ಆಹಾರ ಬೇಯಿಸಿಕೊಂಡು ಬಿಡಾರ ಹೂಡುವ ಮೂಲಕ ಸಂಚಾರಕ್ಕೆ ಅಡ್ಡಿಯುಂಟು ಮಾಡಿರುವ ವರದಿಯಾಗಿದೆ. ಸಮೈಕ್ಯ ಆಂಧ್ರ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಮತ್ತು ವಿವಿಧ ಸಂಘಟನೆಗಳು ಒಟ್ಟಾಗಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ವಿವಿಧ ವಕೀಲರ ಸಂಘಗಳು ಆಗಸ್ಟ್ 8ರವರೆಗೆ ನೀಡಿದ್ದ ಕೋರ್ಟ್ ಕಲಾಪ ಬಹಿಷ್ಕಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT