ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಕರಹಿತ ರೇಷ್ಮೆ ಆಮದಿಗೆ ವಿರೋಧ

Last Updated 18 ಮಾರ್ಚ್ 2011, 9:30 IST
ಅಕ್ಷರ ಗಾತ್ರ

ಕೋಲಾರ: ಸುಂಕರಹಿತವಾಗಿ ರೇಷ್ಮೆ ನೂಲು ಆಮದು ಮಾಡಿಕೊಳ್ಳುವುದನ್ನು ವಿರೋಧಿಸಿ ನಗರದಲ್ಲಿ ಗುರುವಾರ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನಾ ಮೆರವಣಿಗೆ, ಧರಣಿ ನಡೆಸಿದರು. ನಗರದ ಗಾಂಧಿವನದಿಂದ ಮೆರವಣಿಗೆ ಶುರುಮಾಡಿದ ಪ್ರಮುಖರು, ರೈತರು, ಕಾರ್ಯಕರ್ತರು ಎಂ.ಜಿ.ರಸ್ತೆ, ಕಾಲೇಜು ವೃತ್ತ, ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಅಲ್ಲಿ ಧರಣಿ ನಡೆಸಿದರು.

ಸುಂಕರಹಿತವಾಗಿ ರೇಷ್ಮೆ ನೂಲು ಆಮದು ಮಾಡಿಕೊಳ್ಳುವುದರಿಂದ ಸ್ಥಳೀಯ ರೈತರಿಗೆ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಲುವು ಬದಲಿಸಬೇಕು ಎಂದು ಆಗ್ರಹಿಸಿದರು.ದೇಶಿ ರೈತ ಪರ ನಿಲುವು ಪ್ರಕಟಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರನಾರಾಯಣರೆಡ್ಡಿ, ಜಿಲ್ಲಾ ಘಟಕದ ಶಾಮಣ್ಣಗೌಡ, ಚಿನ್ನಾಪುರ ನಾರಾಯಣಸ್ವಾಮಿ, ಸಿರಾಜ್, ಜಯಶಂಕರ್, ಪಿ.ಎಸ್.ಸತ್ಯನಾರಾಯಣರಾವ್, ಪಾರ್ಥಸಾರಥಿ, ಓಂಶಕ್ತಿ ಚಲಪತಿ, ಶ್ರೀನಿವಾಸ್, ಶಾಂತಮ್ಮ, ಅರುಣಕುಮಾರ್, ಕೆಂಪಣ್ಣ, ಲಕ್ಷ್ಮಣಗೌಡ, ಶಿವಾರೆಡ್ಡಿ,ಜಾಮಿಲ್ ಅಲ್ಜಾಖಾನ್, ಸಾವುಕಾರ ಶಂಕರಪ್ಪ, ಯಲ್ದೂರು ಪದ್ಮನಾಭ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT