ನವದೆಹಲಿ (ಪಿಟಿಐ): 1993ರ ಟೆಲಿಕಾಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸುಖ್ರಾಂ ಮತ್ತು ಇನ್ನಿಬ್ಬರ ಜಾಮೀನು ಅರ್ಜಿ ಸೋಮವಾರ ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ.
ಈ ಹಗರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ಶಿಕ್ಷೆಗೆ ಒಳಗಾಗಿರುವ ಸುಖ್ರಾಂ ವಿಚಾರಣಾ ನ್ಯಾಯಾಲಯಕ್ಕೆ ಶರಣಾದ ಬಳಿಕ ನ್ಯಾಯಮೂರ್ತಿ ಪಿ. ಸದಾಶಿವನ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಜ. 9ರಂದು ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.
ಈ ಆರೋಪಿಗಳ ಮಧ್ಯಂತರ ಜಾಮೀನಿನ ಅವಧಿ ಸೋಮವಾರ ಮುಕ್ತಾಯಗೊಳ್ಳಲಿದೆ. ಈ ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ನಿವೃತ್ತ ಐಎಎಸ್ ಅಧಿಕಾರಿ ರಾನು ಘೋಷ್ ಹಾಗೂ ಹೈದರಾಬಾದ್ ಮೂಲದ ಪಿ. ರಾಮ ರಾವ್ ಅವರಿಗೂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.