ನವದೆಹಲಿ (ಪಿಟಿಐ): ಮೂರು ವರ್ಷಗಳ ಸೆರೆವಾಸ ಶಿಕ್ಷೆಗೆ ಗುರಿಯಾದ ಮಾಜಿ ಸಚಿವ ಸುಖ್ರಾಂ ಮತ್ತು ಇದೇ ಪ್ರಕರಣದ ಇನ್ನಿಬ್ಬರು ಸಹಅಪರಾಧಿಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 1993ರ ಟೆಲಿಕಾಂ ಹಗರಣ ಕುರಿತಂತೆ ಈ ಮೂವರಿಗೆ ಅಧೀನ ನ್ಯಾಯಾಲಯವು ಸಜೆ ವಿಧಿಸಿತ್ತು.
ಎರಡು ವರ್ಷಗಳ ಸೆರೆವಾಸ ವಿಧಿಸಲಾಗಿರುವ ಮಾಜಿ ಅಧಿಕಾರಿ ರುನು ಘೋಷ್ ಮತ್ತು ಮೂವರು ವರ್ಷಗಳ ಶಿಕ್ಷೆಗೆ ಗುರಿಯಾದ ಹೈದರಾಬಾದ್ ಮೂಲದ ಉದ್ಯಮಿ ಪಿ. ರಾಮರಾವ್ ಅವರಿಗೂ ಇದೇ 16ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.