ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರು ಸುಪ್ರೀಂ ಕೋರ್ಟ್ಗೆ ಪದೋನ್ನತಿ ಹೊಂದಲಿದ್ದಾರೆಯೇ? `ವಕೀಲರ ದಿನಾಚರಣೆ' ಕಾರ್ಯಕ್ರಮದಲ್ಲಿ ಕೇಳಿಬಂದ ಮಾತುಗಳು ಈ ಪ್ರಶ್ನೆಗೆ `ಹೌದು' ಎಂಬ ಉತ್ತರ ನೀಡುತ್ತವೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಅವರು, `ಸುಪ್ರೀಂ ಕೋರ್ಟ್ಗೆ ಪದೋನ್ನತಿ ಹೊಂದಲಿರುವ ಮುಖ್ಯ ನ್ಯಾಯಮೂರ್ತಿ ಸೇನ್ ಅವರಿಗೆ ಅಭಿನಂದನೆಗಳು' ಎಂದರು. ಆ ಮೂಲಕ ನ್ಯಾ. ಸೇನ್ ಪದೋನ್ನತಿಯನ್ನು ಸೂಚ್ಯವಾಗಿ ತಿಳಿಸಿದರು.
ಹೈಕೋರ್ಟ್ನಲ್ಲಿ ಎಂಟು ಹುದ್ದೆಗಳು ಸೇರಿದಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 180 ನ್ಯಾಯಾಧೀಶರ ಹುದ್ದೆ ಖಾಲಿ ಇದೆ. ಇದನ್ನು ಭರ್ತಿ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬಾರೆಡ್ಡಿ ಕೋರಿದರು.