ನವದೆಹಲಿ (ಪಿಟಿಐ): ಆರೋಗ್ಯ ಸರಿ ಇಲ್ಲದ ಕಾರಣ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರಾಗಿ ಸಾಕ್ಷಿ ಹೇಳುವುದಕ್ಕೆ ವಿನಾಯ್ತಿ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ 2ಜಿ ಹಗರಣದ ಪ್ರಮುಖ ಸರ್ಕಾರಿ ಸಾಕ್ಷಿ ಮತ್ತು ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಪತ್ನಿ ದಯಾಳು ಅಮ್ಮಾಳ್ ಅವರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.