ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರೇಶ್ ಕಲ್ಮಾಡಿ ನಿಕಟವರ್ತಿಗಳ ಬಂಧನ

Last Updated 23 ಫೆಬ್ರುವರಿ 2011, 18:55 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಕಾಮನ್‌ವೆಲ್ತ್ ಕ್ರೀಡಾಕೂಟ ಹಗರಣಕ್ಕೆ ಸಂಬಂಧಿಸಿದಂತೆ ಕ್ರೀಡಾಕೂಟದ ಸಂಘಟನಾ ಸಮಿತಿಯ ಅಧ್ಯಕ್ಷ  ಸುರೇಶ್ ಕಲ್ಮಾಡಿ ಅವರ ಇಬ್ಬರು ನಿಕಟವರ್ತಿಗಳನ್ನು ಸಿಬಿಐ ಬುಧವಾರ ಬಂಧಿಸಿದೆ.

 ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಲಲಿತ್ ಭಾನೋಟ್ ಮತ್ತು ಪ್ರಧಾನ ನಿರ್ದೇಶಕರಾಗಿದ್ದ ವಿ.ಕೆ.ವರ್ಮಾ ಬಂಧಿತರು. 25 ವರ್ಷಕ್ಕೂ ಹೆಚ್ಚು ಸಮಯ ಈ ಇಬ್ಬರೂ ಕ್ರೀಡಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

 ಕ್ರೀಡಾ ಗಡಿಯಾರಕ್ಕೆ ಸಂಬಂಧಿಸಿದಂತೆ ಸ್ವಿಟ್ಜರ್‌ಲೆಂಡ್‌ನ ಕಂಪೆನಿಯೊಂದಿಗೆ ನಡೆದ 1.7 ಶತಕೋಟಿ ರೂಪಾಯಿ ಒಪ್ಪಂದದಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಇವರನ್ನು, ಕಳೆದ ತಿಂಗಳು ವಜಾ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT