ಬೆಂಗಳೂರು: ಲೋಕಸಭೆ ಮತ್ತು ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಸೋಲಿನಿಂದ ಹತಾಶೆಗೊಂಡಿರುವ ಬಿಜೆಪಿ, ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ವಿನಾಕಾರಣ ಟೀಕೆ ಮಾಡಿದೆ. ಸುಳ್ಳು ಆರೋಪ ಪಟ್ಟಿಯನ್ನೂ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಬಿಜೆಪಿಗೆ ಯಾವುದೇ ನಿರ್ದಿಷ್ಟ ಕಾರ್ಯಸೂಚಿ ಇಲ್ಲ. ಹೀಗಾಗಿ 100 ದಿನಗಳಲ್ಲಿ 101 ತಪ್ಪುಗಳನ್ನು ಹುಡುಕಿದೆ. ಈ ರೀತಿಯ ಸುಳ್ಳು ಆರೋಪಗಳ ಪಟ್ಟಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ' ಎಂದರು.