`ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ಒದಗಿಸಬೇಕು ಎಂದು ಒತ್ತಾಯಿಸಿ ಅನೇಕ ವರ್ಷಗಳಿಂದ ಎಲ್ಲ ಸರ್ಕಾರಗಳಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಯಾರೂ ಈ ಬೇಡಿಕೆಯನ್ನು ಈಡೇರಿಸಿಲ್ಲ. ಲಿಂಗಾಯಿತ ಸಮಾಜದ 17 ಪಂಗಡಗಳನ್ನು 2-ಎಗೆ ಸೇರಿಸಿರುವ ಸರ್ಕಾರಗಳು ಪಂಚಮಸಾಲಿ ಸಮಾಜದವರ ನೋವಿಗೆ ಸ್ಪಂದಿಸಿಲ್ಲ' ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.