ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸೂತ್ರ ಆಯ್ಕೆ

Last Updated 10 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಸೇರುವುದಕ್ಕೂ ಮುನ್ನ ನಾಟಕೀಯ ಬೆಳವಣಿಗೆಗಳು ನಡೆದರೂ ಅಂತಿಮವಾಗಿ ಹೊಸ ನಾಯಕನ ಆಯ್ಕೆ ಸುಸೂತ್ರವಾಗಿ ನಡೆಯಿತು.

ನಿರೀಕ್ಷೆಯಂತೆ ಜಗದೀಶ ಶೆಟ್ಟರ್ ಸರ್ವಾನುಮತದಿಂದ ಹೊಸ ನಾಯಕನಾಗಿ ಆಯ್ಕೆಯಾದರು. ಬಳಿಕ ಮಾತನಾಡಿದ ಎಲ್ಲ ಮುಖಂಡರೂ ಒಗ್ಗಟ್ಟಿನ ಮಂತ್ರ ಜಪಿಸಿದರು. `ಚುನಾವಣಾ ವರ್ಷವಾದ ಕಾರಣ, ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು~ ಎಂದು ಕರೆ ನೀಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, `ಸಂಧ್ಯಾ ಸುರಕ್ಷಾ, ಅಂಗವಿಕಲರ ವೇತನ, ವಿಧವಾ ವೇತನ, ಭಾಗ್ಯಲಕ್ಷ್ಮಿ ಬಾಂಡ್... ಹೀಗೆ ಹಲವು ಸಾಮಾಜಿಕ ಭದ್ರತಾ ಯೋಜನೆಗಳ ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ತಕ್ಷಣ ಇದಕ್ಕೆ ಚುರುಕು ಮುಟ್ಟಿಸಬೇಕು~ ಎಂದು ನಿಯೋಜಿತ ಮುಖ್ಯಮಂತ್ರಿ ಶೆಟ್ಟರ್ ಅವರಿಗೆ ಸಲಹೆ ನೀಡಿದರು.

`ಚುನಾವಣೆಗೆ ಇನ್ನು ಕೇವಲ 10 ತಿಂಗಳು ಇದೆ. ಶೆಟ್ಟರ್ ವಿಶ್ರಾಂತಿ ಇಲ್ಲದೆ ಓಡಾಡಬೇಕು. ಅಭಿವೃದ್ಧಿ ಕಡೆಗೆ ಗಮನ ನೀಡಬೇಕು. ಮುಂದಿನ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು~ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ, `ಹನ್ನೊಂದು ತಿಂಗಳು ಉತ್ತಮ ಆಡಳಿತ ನೀಡಿದ್ದೇನೆ. ಉಳಿದ ಅವಧಿಗೆ ಶೆಟ್ಟರ್ ಅವರಿಗೆ ಪೂರ್ಣ ಸಹಕಾರ ನೀಡುತ್ತೇನೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT