ಮುಂಬೈ(ಪಿಟಿಐ): ಸುಧಾರಣೆ ಕ್ರಮಗಳಿಂದ ಆರ್ಥಿಕ ಪುನಶ್ಚೇತನ ಈಗ ವೇಗ ಪಡೆದುಕೊಂಡಿದ್ದು, ಮುಂದಿನ ಆರು ತಿಂಗಳಲ್ಲಿ ಇನ್ನಷ್ಟು `ಸುಸ್ಥಿರ~ ಪ್ರಗತಿ ನಿರೀಕ್ಷಿಸಬಹುದು ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ಇಲ್ಲಿ ನಡೆದ ಅಂತರರಾಷ್ಟ್ರೀಯ ಬ್ಯಾಂಕಿಂಗ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಇತ್ತೀಚೆಗೆ ಕೈಗೊಂಡ ಆರ್ಥಿಕ ಸುಧಾರಣೆಗಳಿಂದ ಮುಖ್ಯವಾಗಿ ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮರಳಿದೆ ಎಂದರು.